Kashmir.Jammu,Hosanagara,Soliders,Poonch Accident.
5 Soldiers killed as vehicle falls into gorge in Poonch
ಜಮ್ಮು ಮತ್ತು ಕಾಶ್ಮೀರ : ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ.

ಘಟನೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಸಮೀಪದ ಸಾಂಬ್ರಾ ಗ್ರಾಮದ ಸುಬೇದಾರ ದಯಾನಂದ ತಿರಕಣ್ಣವರ (45), ಕುಂದಾಪುರ ಸಮೀಪದ ಕೋಟೇಶ್ವರ ಬಿಜಾಡಿಯ ಅನೂಪ್ (33), ಮಹಾಲಿಂಗಪುರದ ಮಹೇಶ (25) ಹುತಾತ್ಮರಾದ ಯೋಧರು.
ಸೇನಾ ವಾಹನವು ಕಿರಿದಾದ ರಸ್ತೆಯಿಂದ 150 ಅಡಿಗಳಷ್ಟು ಆಳದ ಪ್ರಪಾತಕ್ಕೆ ಬಿದ್ದು , ಅಪಘಾತ ಸಂಭವಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.
All ranks of #WhiteKnightCorps extend their deepest condolences on the tragic loss of five brave soldiers in a vehicle accident during operational duty in the #Poonch sector.
— White Knight Corps (@Whiteknight_IA) December 24, 2024
Rescue operations are ongoing, and the injured personnel are receiving medical care.@adgpi…

ಮೃತ ಯೋಧ ಅನೂಪ್ ರವರ ಕೆಲ ಸಂಬಂಧಿಗಳು ಹೊಸನಗರ ಮೂಲದವರು ಹಾಗಾಗಿ ಅನೇಕ ಬಾರಿ ಹೊಸನಗರಕ್ಕೂ ಕೂಡ ಆಗಮಿಸಿದ್ರು. ಸಾವಿನ ವಿಚಾರ ತಿಳಿಯುತ್ತಿದ್ದಂತೆ ಸಂಬಂಧಿಗಳು ಹುತಾತ್ಮ ಯೋಧನ ಮನೆಗೆ ತೆರಳಿದ್ದಾರೆ.
ಈ ಘಟನೆಯ ಕುರಿತಾಗಿ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದ್ದಾರೆ.
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
— CM of Karnataka (@CMofKarnataka) December 25, 2024
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ದೇಶ ಸೇವೆಗಾಗಿ ಜೀವ… pic.twitter.com/g4NtK5aNhY
Kashmir.Jammu,Hosanagara,Soliders,Poonch Accident.

